Loading...
  • aksharakrantinagarajnaik@gmail.com
  • +91 8073197439
Total Visitors: 3706
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-14

ಮಾನಸಿಕ ಒತ್ತಡದಿಂದ ಸ್ವಪ್ನಲ್ ಸಿದ್ದಿ ಆತ್ಮಹತ್ಯೆ

News Details

ಒಳ್ಳೆಯ ಕಂಪನಿ, ಉತ್ತಮ ವೇತನದಲ್ಲಿದ್ದರೂ ಮಾನಸಿಕ ನೆಮ್ಮದಿಯಿಲ್ಲದ ಕಾರಣ ಯಲ್ಲಾಪುರದ ಸ್ವಪ್ನಲ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಲ್ಲಾಪುರದ ಕಿರವತ್ತಿಯ ಇಂದಿರಾನಗರದಲ್ಲಿ ಸ್ವಪ್ನಲ್ ಲಾರೆನ್ಸ್ ಸಿದ್ದಿ ವಾಸವಾಗಿದ್ದರು. 23 ವರ್ಷದ ಅವರಿಗೆ ಬೆಂಗಳೂರಿನ ಕಂಪನಿ ಉದ್ಯೋಗ ನೀಡಿತ್ತು. ಅಲ್ಲಿ ಕಷ್ಟಪಟ್ಟು ದುಡಿದು ಸಂಪಾದಿಸುತ್ತಿದ್ದ ಅವರು ಕೆಲ ದಿನದ ಹಿಂದೆ ಊರಿಗೆ ಬಂದಿದ್ದರು. ಏಪ್ರಿಲ್ 12ರ ಮಧ್ಯಾಹ್ನ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದರು.

ಮನೆಯಲ್ಲಿ ಮಲಗಿದ್ದ ಅವರು 2 ಗಂಟೆ ಆಸುಪಾಸಿನಲ್ಲಿ ಶೌಚಾಲಯಕ್ಕೆ ಹೋದರು. ಅಲ್ಲಿಯೇ ಅವರು ನೇಣು ಹಾಕಿಕೊಂಡು ಸಾವನಪ್ಪಿದರು. ಶೌಚಾಲಯದ ಜಂತಿಗೆ ನೇತಾಡುತ್ತಿದ್ದ ಸ್ವಪ್ನಲ್ ಸಿದ್ದಿ ಅವರನ್ನು ನೋಡಿದ ಅವರ ತಾಯಿ ಸೋಬಿನಾ ಸಿದ್ದಿ ಆತಂಕಕ್ಕೆ ಒಳಗಾದರು. 4 ಗಂಟೆ ಆಸುಪಾಸಿನಲ್ಲಿ ಸ್ವಪ್ನಲ್ ಸಿದ್ದಿ ಶವವಾಗಿದ್ದರು.

ಎಲ್ಲವೂ ಚನ್ನಾಗಿಯೇ ಇದ್ದರೂ ಸ್ವಪ್ನಲ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದು ಏಕೆ? ಎಂದು ಗೊತ್ತಾಗಿಲ್ಲ. ಹೀಗಾಗಿ ಈ ಸಾವಿನಲ್ಲಿ ಅನುಮಾನವಿರುವುದಾಗಿ ಅವರ ಕುಟುಂಬದವರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸೋಬಿನಾ ಸಿದ್ದಿ ಅವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಾವಿನ ಸತ್ಯದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.