Loading...
  • aksharakrantinagarajnaik@gmail.com
  • +91 8073197439
Total Visitors: 881
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-19

ಯಲ್ಲಾಪುರದಲ್ಲಿ ಚಹಾ ಅಂಗಡಿಯಲ್ಲಿ ಸರಾಯಿ ಮಾರಾಟ ಪತ್ತೆ

News Details

ಯಲ್ಲಾಪುರದ ಕುಬೇರ್ ಹೊಟೇಲ್ ಅಂಚಿನಲ್ಲಿ ಚಹಾ ಅಂಗಡಿಯಲ್ಲಿ ಸರಾಯಿ ಮಾರಾಟ ನಡೆಯುತ್ತಿರುವುದನ್ನು ಪಿಎಸ್‌ಐ ಯಲ್ಲಾಲಿಂಗ ಕನ್ನೂರು ಪತ್ತೆ ಮಾಡಿದ್ದಾರೆ.

ತಾತ್ಕಾಲಿಕ ಶೆಡ್ ನಿರ್ಮಿಸಿ ಸರಾಯಿ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಹುಲಿಮನೆಯ ಮಧುಕರ ನಾಯ್ಕ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಏಪ್ರಿಲ್ 17ರಂದು ಪಿಎಸ್‌ಐ ಯಲ್ಲಾಲಿಂಗ ಕನ್ನೂರು ಅವರು ತಮ್ಮ ತಂಡದೊoದಿಗೆ ಚಹಾ ಅಂಗಡಿ ಮೇಲೆ ದಾಳಿ ನಡೆಸಿದರು. ಅಲ್ಲಿ ಕಾನೂನುಬಾಹಿರವಾಗಿ ಅಕ್ರಮ ಮದ್ಯ ದಾಸ್ತಾನು ಮಾಡಿರುವುದನ್ನು ಅವರು ಪತ್ತೆ ಮಾಡಿದರು. ಅಂಗಡಿಯ ತಾತ್ಕಾಲಿಕ ಶೆಡ್ ಒಳಗೆ ಮದ್ಯ ಸೇವನೆಗೆ ಅವಕಾಶ ಕೊಟ್ಟಿರುವುದಕ್ಕಾಗಿ ಮಧುಕರ ನಾಯ್ಕರ ವಿರುದ್ಧ ಪ್ರಕರಣ ದಾಖಲಿಸಿದರು. ಜೊತೆಗೆ ಅಲ್ಲಿದ್ದ 160ರೂ ಹಣ, ಖಾಲಿ ಲೋಟ, 4 ಸರಾಯಿ ಪ್ಯಾಕೇಟ್ ಹಾಗೂ ನೀರಿನ ಬಾಟಲಿಗಳನ್ನು ವಶಕ್ಕೆಪಡೆದರು.