Loading...
  • aksharakrantinagarajnaik@gmail.com
  • +91 8073197439
Total Visitors: 2401
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
17:49:57 2025-03-14

ರಸ್ತೆ ಅಂಚಿನಲ್ಲಿ ಕಸ ಎಸೆಯುವವರಿಂದ ಭಾರೀ ಪ್ರಮಾಣದ ದಂಡ ವಸೂಲಿ

News Details

ರಸ್ತೆ ಅಂಚಿನಲ್ಲಿ ಕಸ ಎಸೆಯುವವರಿಂದ ಭಾರೀ ಪ್ರಮಾಣದ ದಂಡ ವಸೂಲಿ ಜೊತೆ ಅವರ ವಿರುದ್ಧ ಪೊಲೀಸ್ ಪ್ರಕರಣವನ್ನು ದಾಖಲಿಸಬೇಕು' ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸುವ ಮೂಲಕ ಮತ್ತು ನಗರಸಭೆ ಸಿಬ್ಬಂದಿಗಳಿAದ ನಿರಂತರವಾಗಿ ನಿಗಾವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚುವಂತೆ ಸೂಚಿಸಿದರು. `ಕಸ ಹಾಕುವವರಿಗೆ ಗರಿಷ್ಠ ಮಟ್ಟದ ದಂಡವನ್ನು ವಿಧಿಸುವ ಜೊತೆಗೆ ಸಾರ್ವಜನಿಕ ಸ್ಥಳವನ್ನು ವಿರೂಪಗೊಳಿಸಿದ ಕುರಿತಂತೆ ಪೊಲೀಸ್ ಪ್ರಕರಣವನ್ನು ದಾಖಲಿಸಿ. ಪ್ರಕರಣ ದಾಖಲಿಸಿದ ಮತ್ತು ದಂಡ - ಪ್ರಗತಿಯ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ' ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. `ರಾಷ್ಟಿಯ ಹೆದ್ದಾರಿಯ ವ್ಯಾಪ್ತಿಯಲ್ಲಿ ತ್ಯಾಜ್ಯ ಕಂಡು ಬಂದಲ್ಲಿ ಸಂಬ0ಧಪಟ್ಟ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆದ್ದಾರಿಯಲ್ಲಿ ಪ್ರವಾಸಿಗರಿಗಿಂತ ಸ್ಥಳೀಯರಿಂದಲೇ ಹೆಚ್ಚಿನ ಪ್ರಮಾಣದ ತ್ಯಾಜ್ಯ ಸಂಗ್ರಹವಾಗುತ್ತಿದ್ದು ಈ ಬಗ್ಗೆ ಪರಿಶೀಲಿಸಬೇಕು. ನಗರ ಪ್ರದೇಶದಲ್ಲಿ ಕಸ ಹಾಕುವ ಪ್ರದೇಶದಲ್ಲಿನ ಅಕ್ಕಪಕ್ಕದ ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿರುವ ಸಿಸಿ ಟಿವಿಗಳನ್ನು ಪರಿಶೀಲಿಸಿ ಕಸ ಹಾಕುವವರನ್ನು ಗುರುತಿಸಬೇಕು' ಎಂದರು. `ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಣೆಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಂಗಡಣೆ ಮಾಡಿ ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬೇಕು. ಹಸಿ ಕಸದಿಂದ ಕಾಂಪೋಸ್ಟ್ ತಯಾರಿಕೆಗೆ ಆದ್ಯತೆ ನೀಡಬೇಕು. ಒಣ ಕಸವನ್ನು ಸಂಸ್ಕರಿಸಿ ಮಾರಾಟ ಮಾಡಬೇಕು' ಎಂದರು. `ಇ-ತ್ಯಾಜ್ಯ ಸಂಗ್ರಹಣೆ ಕುರಿತಂತೆ ಅರಿವು ಮೂಡಿಸಿ ಆಭಿಯಾನ ಮಾದರಿಯಲ್ಲಿ ಕ್ರಮ ಕೈಗೊಂಡು ಈ ತಿಂಗಳ ಅಂತ್ಯಕ್ಕೆ ಸಂಗ್ರಹಿಸಿದ ಇ-ತ್ಯಾಜ್ಯದ ವಿವರಗಳನ್ನು ನೀಡಬೇಕು. ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಈ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಮತ್ರಣ ಮಂಡಳಿವತಿಯಿ0ದ ನಿರಂತರವಾಗಿ ದಾಳಿಗಳನ್ನು ನಡೆಸಬೇಕು' ಎಂದು ಸೂಚಿಸಿದರು. `ವೈದ್ಯಕೀಯ ತ್ಯಾಜ್ಯಗಳ ಸಂಗ್ರಹ ಮತ್ತು ವಿಲೇವಾರಿಯನ್ನು ಇನ್ನೂ ಹೆಚ್ಚು ಸಮಪರ್ಕಕವಾಗಿ ಕೈಗೊಳ್ಳಬೇಕು. ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಡ್ಡಾಯವಾಗಿ 3 ತಿಂಗಳಿಗೊಮ್ಮೆ ನಡೆಸುವ ಮೂಲಕ ಜಿಲ್ಲೆಯನ್ನು ಸಂಪೂರ್ಣ ತ್ಯಾಜ್ಯ ಮುಕ್ತ ಸ್ವಚ್ಛ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸಬೇಕು' ಎಂದರು. ಈ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಜಿಲ್ಲಾ ಪರಿಸರ ಅಧಿಕಾರಿ ಬಿ ಕೆ ಸಂತೋಷ್ ಇದ್ದರು.